ಶೆಟ್ಟರ್ ಹೋಗಿರೋದು ದೊಡ್ಡ ಬದಲಾವಣೆ ಆಗೋದಿಲ್ಲ ಅನಿಸುತ್ತೆ: ಲಕ್ಷ್ಮಣ್ ಸವದಿ

ಬೆಂಗಳೂರು: ಜಗದೀಶ್ ಶೆಟ್ಟರ್ ಬೆನ್ನಲ್ಲೇ ಸವದಿ ಕೂಡ ಬಿಜೆಪಿ ಸೇರುತ್ತಾರೆ ಎಂಬ ವಿಚಾರಕ್ಕೆ ಬೆಂಗಳೂರಿನಲ್ಲಿ ಶಾಸಕ ಲಕ್ಷ್ಮಣ್ ಸವದಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು, ಅವರು ಒಟ್ಟಿಗೆ ನಿರ್ಧಾರ ಮಾಡಿರಲಿಲ್ಲ. ನಾನು ಮೊದಲು ಕಾಂಗ್ರೆಸ್‍ಗೆ ಬಂದೆ. ಟಿಕೆಟ್ ಸಿಗದ ಕಾರಣ ಅವರು ನಂತರ ಬಂದರು. ಯಾಕೆ ಹೋಗಿದ್ದಾರೆ ಅಂತ ಗೊತ್ತಿಲ್ಲ, ಅವರನ್ನೇ ಕೇಳಬೇಕು. ನನ್ನನ್ನ ಬಿಜೆಪಿ ಸಂಪರ್ಕ ಮಾಡಿಲ್ಲ, ಆ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಲೋಕಸಭೆ ಅಗತ್ಯ, ಅನಿವಾರ್ಯ ಇದೆ.

ಹಾಗಾಗಿ ಎಲ್ಲರನ್ನ ಸಂಪರ್ಕ ಮಾಡುತ್ತಿದ್ದಾರೆ. ನಾನು ಎಲ್ಲೂ ಹೋಗಲ್ಲ. ಇದು ನನ್ನ ತೀರ್ಮಾನ ಎಂದರು. ರಾಷ್ಟ್ರೀಯ ಪಕ್ಷಗಳು ಬ್ಯಾಲೆನ್ಸ್ ಆಗಿರುತ್ತೆ. ನನ್ನಿಂದಲೇ ಎಲ್ಲಾ ಆಗುತ್ತೆ ಅನ್ನೋಕೆ ಆಗಲ್ಲ. ಶೆಟ್ಟರ್ ಹೋಗಿರೋದು ದೊಡ್ಡ ಬದಲಾವಣೆ ಆಗೋದಿಲ್ಲ ಅನಿಸುತ್ತೆ. ಶೆಟ್ಟರ್ ವೈಯಕ್ತಿಕ ವಿಚಾರವಾಗಿ ನಿರ್ಧಾರ ಮಾಡಿದ್ದಾರೆ. ನನ್ನ ನಿರ್ಧಾರ ಸ್ಪಷ್ಟವಾಗಿದೆ. ನಾನು ಎಲ್ಲೂ ಹೋಗಲ್ಲ ಎಂದರು.

Loading

Leave a Reply

Your email address will not be published. Required fields are marked *