ಶಿವಮೊಗ್ಗ: ಮುಖ್ಯಮಂತ್ರಿಗಳು ಕೃಷಿ ಸಚಿವರನ್ನು ಸಂಪುಟದಿಂದ ಕೈಬಿಡಬೇಕು. ಹಣ ಲೂಟಿ ಮಾಡಿರುವವರ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಸರ್ಕಾರ ಬಂದು 3 ತಿಂಗಳು ಆಗಿಲ್ಲ, ರೈತರಿಗೆ ತೊಂದರೆ ಕೊಡುತ್ತಿದ್ದಾರೆ. ರೈತರಿಗೆ ಬಿಎಸ್ ಯಡಿಯೂರಪ್ಪನವರು ಕೊಟ್ಟ ಹಣ ವಾಪಸ್ ಪಡೆಯುತ್ತಿದ್ದಾರೆ. ಗ್ಯಾರಂಟಿ ಯೋಜನೆಗೆ ಬಜೆಟ್ನಲ್ಲಿಟ್ಟ ಬೇರೆ ಹಣ ಬಳಸುತ್ತಿದ್ದಾರೆ. ರೈತರ ದ್ರೋಹಿ ಯಾರಾದರೂ ಇದ್ದರೆ ಅದು ಸಿಎಂ ಸಿದ್ದರಾಮಯ್ಯ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ಮಾಡಿದರು.