ವಿಜಯಪುರ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಶಂಖನಾದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಯತ್ನಾಳ ‘ಹಿಂದೂ ಸನಾತನ ಧರ್ಮ ಕಾಗೆ ಇದ್ದ ಹಾಗೆ ಎಂದು ಪ್ರಕಾಶ ರಾಜ್ ಹೇಳಿದ್ದ. ಅದಕ್ಕೆ ನಾನು ಪ್ರಕಾಶ ರಾಜ್ ಹಂದಿ ಎಂದು ಉತ್ತರ ಕೊಟ್ಟಿದ್ದೆ. ಸುಖಾಸುಮ್ಮನೆ ಮಾತನಾಡದೇ ಬರೋಬ್ಬರಿಯಾಗಿ ಉತ್ತರಿಸಬೇಕೆಂದು ಕಾರ್ಯಕರ್ತರಿಗೆ ಯತ್ನಾಳ ಸೂಚಿಸಿದ್ದು, ಮರ್ಯಾದೆ ಕೊಟ್ಟರೆ ಮರ್ಯಾದೆ ಕೊಡೋಣಾ, ಯಾಕಲೋ ಎಂದರೆ ಯಾಕೋ ಮಗನೇ ಎನ್ನಬೇಕೆಂದು ಹೇಳಿದ್ದಾರೆ.