ಹಿಂದೂ ಧರ್ಮದ ಬಗ್ಗೆ ಡಾ.ಪರಮೇಶ್ವರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಗೃಹ ಸಚಿವ ಡಾ.ಪರಮೇಶ್ವರ್ ಹೇಳಿರುವುದನ್ನು ನಾನು ಒಪ್ಪಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೆಸರಲ್ಲೇ ಈಶ್ವರ ಇದ್ದಾನೆ. ಪ್ರಕೃತಿಯನ್ನು ಯಾರು ಹುಟ್ಟಿಸಿದ್ದು ಅಂತಾ ಹೇಳಲು ಆಗುತ್ತಾ? ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕ್ತಿದೆ. ಕಾಂಗ್ರೆಸ್ಸಿಗರು ಎಲ್ಲವನ್ನೂ ಚುನಾವಣೆ ದೃಷ್ಟಿಯಿಂದ ಅಳೆಯುತ್ತಿದ್ದಾರೆ. ಕಾಂಗ್ರೆಸ್ನವರಿಗೆ ಭಾರತ ಅಂತಾ ಕರೆಯೋದು ಅವಮಾನ ಎಂದು ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.