ತಮಿಳುನಾಡಿಗೆ ನೀರು ಬಿಡದೇ ಇರಲು ಸರ್ವ ಪಕ್ಷ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವ ಪಕ್ಷ ಸಭೆಯಲ್ಲಿ ಒಮ್ಮತದ ತೀರ್ಮಾನವಾಗಿದ್ದು ತಮಿಳುನಾಡಿಗೆ ನೀರು ಬಿಡದೇ ಇರಲು ತೀರ್ಮಾನ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಮ್ಮತದ ನಿರ್ಧಾರವಾಗಿದ್ದು ತಮಿಳುನಾಡಿಗೆ ನೀರು ಬಿಡದೇ ಇರಲು ತೀರ್ಮಾನಿಸಲಾಗಿದೆ. ಸುಪ್ರೀಂಕೋರ್ಟ್ ನಲ್ಲಿ ಕಾನೂನು ಹೋರಾಟ ಮುಂದುವರೆಸಲು ರಾಜ್ಯ ಸರ್ಕಾರ ನಿರ್ಧಾರ ಕೈಳ್ಳಲಾಗಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಮತ್ತು ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯ ಸಭಾ ಸದಸ್ಯರುಗಳು ತುರ್ತು ಸಭೆಯಲ್ಲಿ ಉಪಸ್ಥಿತರಿದ್ದರು.

Loading

Leave a Reply

Your email address will not be published. Required fields are marked *