ರಾಮನಗರ: ಡಿ.ಕೆ.ಶಿವಕುಮಾರ್ ಅವರಿಂದಲೇ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಿದ್ದು ಎಂದು ರಾಮನಗರ ಜಿಲ್ಲಾ ಮುಖಂಡರ ಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಪತನವಾಗು ಗ್ಯಾರಂಟಿ, ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗೋದು ಖಚಿತ. ನಮ್ಮ ಹಾಸನಕ್ಕೆ ಕಳಿಸಬಹುದು,
ಅವರು ತಿಹಾರ್ಗೆ ಓಡುವ ಕಾಲ ಹತ್ತಿರವಿದೆ. ಡಿ.ಕೆ.ಶಿವಕುಮಾರ್ ಒಮ್ಮೆ ತಿಹಾರ್ ಜೈಲು ನೋಡಿಕೊಂಡು ಬಂದಿದ್ದಾರೆ. ಅವರು ಶಾಶ್ವತವಾಗಿ ತಿಹಾರ್ಗೆ ಹೋದರೂ ಅಚ್ಚರಿ ಅಲ್ಲ. ನನ್ನ ಕೈಯನ್ನು ಮೇಲೆ ಎತ್ತಿ ಜೋಡೆತ್ತು ಎಂದಿದ್ದನ್ನು ಕೇಳಿ ಮೋಸ ಹೋದೆ. ನನ್ನನ್ನು ನಡುರಸ್ತೆಯಲ್ಲಿ ಕೈಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಹೇಳಿದರು.