ಬೆನ್ನುನೋವಿನಿಂದ ಜಡೇಜಾ ಗೈರು- ಟೆಸ್ಟ್​ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಕನ್ನಡಿಗ

ಸೆಂಚುರಿಯನ್​ನಲ್ಲಿ ಟೆಸ್ಟ್​ ಕ್ರಿಕೆಟ್​ಗೆ ಕನ್ನಡಿಗ ಪ್ರಸಿದ್ಧ ಕೃಷ್ಣ ಪಾದಾರ್ಪಣೆ ಮಾಡಿದ್ದು, ಬೆನ್ನುನೋವಿನಿಂದ ಜಡೇಜಾ ಗೈರಾಗಿದ್ದಾರೆ.

ಆಲ್ರೌಂಡರ್​ ರವೀಂದ್ರ ಜಡೇಜಾ ಬೆನ್ನುನೋವಿನ ಸಮಸ್ಯೆಯಿಂದಾಗಿ ಮೊದಲ ಟೆಸ್ಟ್​ ಪಂದ್ಯಕ್ಕೆ ಅಲಭ್ಯರಾದರು. ಅವರ ಗೈರಿನಲ್ಲಿ ಅನುಭವಿ ಸ್ಪಿನ್ನರ್​ ಆರ್​.

ಅಶ್ವಿನ್​ ಆಡುವ 11ರ ಬಳಗದಲ್ಲಿ ಸ್ಥಾನ ಸಂಪಾದಿಸಿದರು.

ದಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಪಂದ್ಯದ ಮೊದಲ ದಿನದಾಟದ ವೇಳೆ ಗಾಯದಿಂದಾಗಿ ಮೈದಾನ ತೊರೆದರು. ಮಾಕೋರ್ ಜಾನ್ಸೆನ್​ ಎಸೆದ 20ನೇ ಓವರ್​ನಲ್ಲಿ ವಿರಾಟ್​ ಕೊಹ್ಲಿ ಹೊಡೆದ ಚೆಂಡನ್ನು ಡೈವ್​ ಮಾಡಿ ತಡೆಯುವ ಯತ್ನದ ವೇಳೆ ಬವುಮಾನ ಎಡಗಾಲಿನ ಸ್ನಾಯುಸೆಳೆತಕ್ಕೆ ಒಳಗಾದರು. ಇದರಿಂದಾಗಿ ಬವುಮಾ ಪಂದ್ಯದಲ್ಲಿ ಮರಳಿ ಕಣಕ್ಕಿಳಿಯುವುದು ಅನುಮಾನವೆನಿಸಿದೆ. ಬವುಮಾ ಗೈರಿನಲ್ಲಿ ಅನುಭವಿ ಬ್ಯಾಟರ್​ ಡೀಲ್​ ಎಲ್ಗರ್​ ಹಂಗಾಮಿ ನಾಯಕರಾಗಿ ತಂಡವನ್ನು ಮುನ್ನಡೆಸಿದರು. ಬವುಮಾ ಬದಲಿಗೆ ವಿಯಾನ್​ ಮುಲ್ಡರ್​ ಫೀಲ್ಡಿಂಗ್​ ನಿರ್ವಹಿಸಿದರು.

Loading

Leave a Reply

Your email address will not be published. Required fields are marked *