ಜೆಡಿಎಸ್​, ಬಿಜೆಪಿ ಒಟ್ಟಾಗಿ ಕೆಲಸ ಮಾಡುವ ನಿರ್ಧಾರ: ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿಯೂ ವಿರೋಧ ಪಕ್ಷ, ಜೆಡಿಎಸ್ ಸಹ ವಿರೋಧ ಪಕ್ಷ. ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಆಗಿದೆ. ಎಲ್ಲರ ಅಭಿಪ್ರಾಯ ಪಡೆದು ಪಕ್ಷದ ಸಂಘಟನೆಗೆ 10 ಜನರ ತಂಡ ರಚನೆ ಮಾಡಲಾಗಿದೆ. ಇಡೀ ರಾಜ್ಯದಲ್ಲಿ ಸರ್ಕಾರದ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಧ್ವನಿ ಎತ್ತುವಂತೆ ದೇವಗೌಡರು ಸಂದೇಶ ನೀಡಿದ್ದಾರೆ. ನಮಗೆ ದೇವೇಗೌಡರು ಸಲಹೆ ನೀಡಿದ್ದಾರೆ. ದೇವೇಗೌಡರ ಮಾರ್ಗದರ್ಶನ, ಪಕ್ಷ ಸಂಘಟನೆ ಮೂಲಕ ಯುವಕರ ತಂಡ ರಚನೆ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹೇಳಿದರು.

Loading

Leave a Reply

Your email address will not be published. Required fields are marked *