ಮೈಸೂರು: ಲೋಕಸಭೆ ಚುನಾವಣೆಗೆ ಉಭಯ ಪಕ್ಷಗಳು ಸಿದ್ಧತೆ ನಡೆಸಿಕೊಂಡಿದೆ. ಅದರಂತೆ ಇದೀಗ ಶೀಘ್ರದಲ್ಲೇ ಜೆಡಿಎಸ್ ರಾಜ್ಯ ಪ್ರವಾಸ ಆರಂಭ ಮಾಡಲಿದೆ ಎಂದು ಜೆಡಿಎಸ್ ಕೋರ್ ಕಮೀಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಲೋಕಸಭಾ ಚುನಾವಣೆಗೆ ಇನ್ನು 7 ರಿಂದ 8 ತಿಂಗಳು ಬಾಕಿ ಇದೆ. ಈಗಾಗಲೇ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಬೇಕು. ಇದಕ್ಕಾಗಿ ಶೀಘ್ರದಲ್ಲೇ ರಾಜ್ಯ ಪ್ರವಾಸ ಮಾಡಲಾಗುವುದು ಎಂದರು.