ಅಧಿಕಾರಕ್ಕಾಗಿ ವಾಮಮಾರ್ಗದ ಮುಖಾಂತರ ಪ್ರಯತ್ನ: HDK ವಿರುದ್ಧ ಡಿ.ಕೆ.ಸುರೇಶ್ ಕಿಡಿ

ಬೆಂಗಳೂರು: ಸರ್ಕಾರ ಬೀಳಲಿದೆ, ಅಜಿತ್ ಪವಾರ್ ಹಾಗೂ ಶಿಂಧೆಗಳಿದ್ದಾರೆ ಅನ್ನೋ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಂಸದ ಡಿ.ಕೆ.ಸುರೇಶ್ (D.K.Suresh) ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಸುರೇಶ್‌, ವಿಪಕ್ಷಗಳಿಗೆ ಅಧಿಕಾರ ಒಂದೇ ಮುಖ್ಯ ಅಂತೇಳಿ ಪದೇ ಪದೇ ಎಲ್ಲಾ ನಾಯಕರು ಸ್ಪಷ್ಟಪಡಿಸುತ್ತಿದ್ದಾರೆ.

ವಿಪಕ್ಷವಾಗಿ ಸೃಜನಾತ್ಮಕ ಕೆಲಸ ಮಾಡಬೇಕು. ಅದನ್ನ ಬಿಟ್ಟು. ಅಧಿಕಾರ ಹೇಗೆ ಹಿಡಿಯಬೇಕು ಅಂತ ವಾಮ ಮಾರ್ಗದ ಮುಖಾಂತರ ಪ್ರಯತ್ನ ಮಾಡ್ತಿದಾರೆ ಎಂದು ಟೀಕಿಸಿದ್ದಾರೆ.

ಕುದುರೆ ವ್ಯಾಪಾರ ಹೇಗೆ ಮಾಡಬೇಕು ಅನ್ನೋ ಬಗ್ಗೆ ಚಿಂತನೆ ಮಾಡ್ತಿದ್ದಾರೆ. ವಿಪಕ್ಷಗಳು ಬೇರೇನೂ ಮಾಡ್ತಿಲ್ಲ. ಕೆಲವರಿಗೆ ಅಭ್ಯಾಸ ಆಗೋಗಿದೆ. ಅಂಥವರು ಹೀಗೆಲ್ಲಾ ಮಾತಾಡುತ್ತಿರುತ್ತಾರೆ. ಅವರ ಆಸೆ ಖಂಡಿತ ಈಡೇರಲ್ಲ. ಐದು ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರದಲ್ಲಿ ಇರಲಿದೆ ಎಂದು ತಿಳಿಸಿದ್ದಾರೆ.

ಯಾರು ಏನೂ ಮಾಡಲು ಸಾಧ್ಯವಿಲ್ಲ. ಸದ್ಯ ಬಿಜೆಪಿ, ಜೆಡಿಎಸ್‌ ನಾಯಕರು ಭ್ರಮೆಯಲ್ಲಿದ್ದಾರೆ. ಭ್ರಮೆಯಿಂದ ಈಚೆ ಬರಬೇಕು. ಅವರಲ್ಲಿರುವ ಲೋಪ ಮುಚ್ಚಿಕೊಳ್ಳಲು, ಪಕ್ಷ ಉಳಿಸಿಕೊಳ್ಳಲು, ಅಸ್ತಿತ್ವ ಉಳಿಸಿಕೊಳ್ಳಲು ಬೇರೆ ರೀತಿ ದೂಷಣೆ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ

Loading

Leave a Reply

Your email address will not be published. Required fields are marked *