ವಕೀಲರ ರಕ್ಷಣೆಗೆ ಕಾನೂನು ಜಾರಿಗೆ ಕ್ರಮ ಕೈಗೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು, ವಕೀಲರ ರಕ್ಷಣೆಗೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿಧಾನಸೌಧದಲ್ಲಿ ಹೇಳಿದ್ದಾರೆ. ವಿಧಾನಸೌಧದಲ್ಲಿ ರಾಜ್ಯ ವಕೀಲರ ಮಂಡಳಿ ಅಧ್ಯಕ್ಷ ಎಚ್.ಎಲ್.ವಿಶಾಲ ರಘು ಹಾಗೂ ಸದಸ್ಯರೊಂದಿಗಿನ ಮಾತುಕತೆ ವೇಳೆ ಮಾತನಾಡಿದ ಮುಖ್ಯಮಂತ್ರಿ, ರಾಜಸ್ಥಾನದಲ್ಲಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತಂದಿದ್ದು, ರಾಜ್ಯದಲ್ಲಿ ಈ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕಾಯ್ದೆಯ ಪ್ರತಿಯನ್ನು ತರಿಸಿಕೊಂಡು ಅಧ್ಯಯನ ಮಾಡಲಾಗುವುದು ಎಂದು ತಿಳಿಸಿದರು. ವಕೀಲರ ಸಂಘಕ್ಕೆ ಶಾಶ್ವತವಾದ ಸ್ಥಳವಿಲ್ಲವಾಗಿದ್ದು, ಪ್ರಸ್ತುತ ಪ್ರೆಸ್ ಕ್ಲಬ್ ಬಳಿ ಇರುವ ಸ್ಥಳದಲ್ಲಿಯೇ ಶಾಶ್ವತವಾಗಿ ಸ್ಥಳಾವಕಾಶ ಮಾಡಿಕೊಡುವಂತೆ ವಕೀಲರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಿಎಂ, ವಕೀಲರ ರಕ್ಷಣೆಗೆ ಕಾನೂನು ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Loading

Leave a Reply

Your email address will not be published. Required fields are marked *