ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಕರಸೇವಕರ ಕುರಿತು ನೀಡಿರುವ ಹೇಳಿಕೆ ಕಾಂಗ್ರೆಸ್ನ ಮನಸ್ಥಿತಿಯನ್ನು ತೋರಿಸುತ್ತದೆ. ರಾಮ ಮಂದಿರ ಉದ್ಘಾಟನೆಗೆ ಅಯೋಧ್ಯೆಗೆ ತೆರಳುವ ಜನರಲ್ಲಿ ಭಯ ಹುಟ್ಟಿಸಲು ಈ ರೀತಿಯ ಹೇಳಿಕೆ ನೀಡಿದ್ದು, ಅವರ ಹೇಳಿಕೆ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ರಾಮಮಂದಿರ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿ ಇಡೀ ದೇಶದಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ರಾಮಜನ್ಮ ಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವುದರಿಂದ ಅದನ್ನು ತಡೆದುಕೊಳ್ಳಲಾಗದೇ ಹತಾಶರಾಗಿ ಕಾಂಗ್ರೆಸ್ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಕೇವಲ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಯಲ್ಲ. ಹರಿಪ್ರಸಾದ್ ಅವರ ಹೇಳಿಕೆ ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ ಪೂಜಾರಿಯ ಬಂಧನದ ಒಂದು ಭಾಗವಾಗಿದೆ ಎಂದು ಹೇಳಿದರು.