ಬೆಂಗಳೂರು: ‘ಒರಿಜಿನಲ್ ಜೆಡಿಎಸ್ ನಮ್ಮದೇ, ಅಧ್ಯಕ್ಷ ಸ್ಥಾನದಿಂದ ತೆಗೆಯಲು ಆಗಲ್ಲ’ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿ ಸಿ.ಎಂ.ಇಬ್ರಾಹಿಂ ಅವರೇ ಒರಿಜಿನಲ್ ಎಂದು ಬೋರ್ಡ್ ಹಾಕಿಕೊಳ್ಳಲಿ.
ಉಚ್ಚಾಟನೆಯಾದರೂ ಮಾಡಲಿ ಏನಾದರೂ ಮಾಡಿಕೊಳ್ಳಲಿ ಅವರಿಗೆ ಬಿಟ್ಟಿದ್ದು. ನಾವು ಎಲ್ಲವನ್ನೂ ಸರಿ ಮಾಡುತ್ತೇವೆ. ಸಿ.ಎಂ.ಇಬ್ರಾಹಿಂ ಫ್ರೀ ಇದ್ದಾರೆ ಏನು ಬೇಕಾದರೂ ಮಾತನಾಡಲಿ. ನಮ್ಮ ಪಕ್ಷದ ಹಿರಿಯ ನಾಯಕರು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.