ಮೊದಲು ಸಿ.ಟಿ.ರವಿ ತಮ್ಮ ಪಂಚೆಯನ್ನು ಸರಿ ಮಾಡಿಕೊಳ್ಳಲಿ -ಸಚಿವ ಎನ್.ಚಲುವರಾಯಸ್ವಾಮಿ

ಮೈಸೂರು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪಂಚೆ ಬಗ್ಗೆ ಸಿ.ಟಿ.ರವಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಮೊದಲು ಸಿ.ಟಿ.ರವಿ ತಮ್ಮ ಪಂಚೆಯನ್ನು ಸರಿ ಮಾಡಿಕೊಳ್ಳಲಿ ಎಂದು ಮೈಸೂರಿನಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಹೀಗೆ ಮಾತನಾಡಿದ್ದಕ್ಕೆ ಚುನಾವಣೆಯಲ್ಲಿ ಜನ ಉತ್ತರಕೊಟ್ಟಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಉತ್ತರವೇ ಅಂತಿಮ. ಕೇವಲ 65 ಸ್ಥಾನಕ್ಕೆ ಕುಸಿದಿರುವ ಬಿಜೆಪಿಯಲ್ಲಿ ಕಚ್ಚಾಟ ಇಲ್ಲವೇ?. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಏನು ಕಿತ್ತಾಡುತ್ತಿದ್ದಾರೆ? ಮನಸ್ಸಿಗೆ ಬಂದಂತೆ ಮಾತನಾಡ್ತಿದ್ದಕ್ಕೆ ಜನರು ಉತ್ತರ ಕೊಟ್ಟಿದ್ದಾರೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

Loading

Leave a Reply

Your email address will not be published. Required fields are marked *