ಭರಮಗಿರಿ ಕ್ರಾಸ್ ಬಳಿ ಬೈಕ್ಗೆ ಲಾರಿ ಡಿಕ್ಕಿ, ಸವಾರ ಸಾವು

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಭರಮಗಿರಿ ಕ್ರಾಸ್ ಬಳಿ ಬೈಕ್ಗೆ ಲಾರಿ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ನಡೆದಿದೆ. ಬಾಗಲಕೋಟೆ ಮೂಲದ ಸೋಮಶೇಖರ್(25) ಮೃತ ವ್ಯಕ್ತಿ. ಬೆಂಗಳೂರಿನ ಕಾಲ್ ಸೆಂಟರ್ನಲ್ಲಿ ಕೆಲಸ ಮಾಡ್ತಿದ್ದ ಸೋಮಶೇಖರ್ ಬೆಂಗಳೂರಿಂದ ಬಾಗಲಕೋಟೆಗೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Loading

Leave a Reply

Your email address will not be published. Required fields are marked *