ಮೈತ್ರಿ ಸಲುವಾಗಿ ರಾಜ್ಯದ ರೈತರ ಹಿತ ಹಾಳು ಮಾಡುತ್ತಿದ್ದಾರೆ: ಪ್ರತಾಪ್ ಸಿಂಹ

ಮೈಸೂರು : ಸಿದ್ದರಾಮಯ್ಯ ಸರ್ಕಾರಕ್ಕೆ ರಾಜ್ಯ ರೈತರ ಹಿತ ಬೇಕಾಗಿಲ್ಲ. ತಮಿಳುನಾಡಿನ ಎಂಕೆ ಸ್ಟಾಲಿನ್ ಅವರ ಡಿಎಂಕೆ ಜೊತೆ ಮೈತ್ರಿ ಮುಖ್ಯ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸಲುವಾಗಿ ರಾಜ್ಯದ ರೈತರ ಹಿತ ಹಾಳು ಮಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ತಮಿಳುನಾಡಿಗೆ ನೀರು ಬಿಡಬೇಡಿ. ವಾಸ್ತವ ಸ್ಥಿತಿಯನ್ನು ಕೋರ್ಟ್ ಮುಂದಿಡಿ ಎಂದು ಸರ್ಕಾರಕ್ಕೆ ನಾನು ಹೇಳಿದ್ದೆ. ಮೊನ್ನೆಯ ಸಭೆಯಲ್ಲಿ ಅದನ್ನೇ ಹೇಳಿದ್ದೆ. ಆದರೆ ಕಾಂಗ್ರೆಸ್ ಸರ್ಕಾರಕ್ಕೆ ಸ್ಟಾಲಿನ್ ಜೊತೆ ಒಳ್ಳೆಯ ನಂಟಿದೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸಲುವಾಗಿ ರಾಜ್ಯದ ರೈತರ ಹಿತ ಹಾಳು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಜನ 135 ಸೀಟು ಕೊಟ್ಟಿದ್ದಾರೆ, ಇನ್ನು 5 ವರ್ಷ ಯಾರು ಏನು ಮಾಡೋಕ್ಕಾಗಲ್ಲ ಎಂದುಕೊಂಡಿದ್ದಾರೆ. ಇದೇ ರೀತಿ ನೀರು ಬಿಟ್ಟರೆ ಬೆಂಗಳೂರು, ಮೈಸೂರು, ಮಂಡ್ಯ ಎಲ್ಲ ಕಡೆ ಕುಡಿಯುವ ನೀರಿಗೂ ಹಾಹಾಕಾರ ಬರುತ್ತದೆ. ತಮಿಳುನಾಡಿನಲ್ಲಿ 4 ಲಕ್ಷ ಹೆಕ್ಟೇರ್ನಲ್ಲಿ ಬೆಳೆ ಬೆಳೆದಿದ್ದಾರೆ, ಅಳತೆಗೆ ಮೀರಿದ ಬೆಳೆ ಬೆಳೆದಿದ್ದಾರೆ. ಸುಪ್ರೀಂ ಕೋರ್ಟ್ನಲ್ಲಿ ಇದನ್ನು ಮನವರಿಕೆ ಮಾಡಿಕೊಡಬೇಕು. ರಾಜ್ಯಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು

Loading

Leave a Reply

Your email address will not be published. Required fields are marked *