ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದ ಹಾನಿ ಹಿನ್ನೆಲೆ ಮಳೆ ಹಾನಿ ಪ್ರದೇಶಗಳಿಗೆ ಇಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಲಿದ್ದಾರೆ. ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನಲ್ಲಿ ಮಳೆ ಹಾನಿ ಪರಿಶೀಲನೆ ನಡೆಸಿ ಮನೆ ಹಾನಿ, ಶಿಥಿಲವಾದ ಸೇತುವೆ, ಭೂಕುಸಿತ ಪ್ರದೇಶ ವೀಕ್ಷಿಸಲಿದ್ದಾರೆ. ಕಳೆದ ವರ್ಷ ಹಾನಿಯಾಗಿದ್ದ ಪ್ರದೇಶಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.