ಮೈಸೂರು: ಪತ್ನಿಗೆ ಚಾಕುವಿನಿಂದ ಇರಿದು ಆತ್ಮಹತ್ಯೆ ಮಾಡಿಕೊಂಡ ಗಂಡ..!

ಮೈಸೂರು: ಪತ್ನಿಗೆ ಚಾಕುವಿನಿಂದ ಇರಿದು ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ‌ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕು ಮುತ್ತಿನ ಮುಳ್ಸೋಗೆ ಗ್ರಾಮದಲ್ಲಿ ನಡೆದಿದೆ. ಒಂದೂವರೆ ವರ್ಷದ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಶ್ವೇತ ಹಾಗೂ ಪ್ರಸನ್ನ ಒಂದೇ ಗ್ರಾಮದವರಾಗಿದ್ದರು.

ಸಂಸಾರದಲ್ಲಿ ಸಾಮರಸ್ಯವಿಲ್ಲದ ಕಾರಣ ಬೇರೆಯಾಗಿದ್ದರು. ಇದೇ ಕಾರಣಕ್ಕೆ ಇಬ್ಬರ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು. ಇದೀಗ ಪತ್ನಿ ಶ್ವೇತಾಗೆ‌ ಮನಬಂದಂತೆ ಇರಿದ ಪ್ರಸನ್ನ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಸಂಬಂಧ ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

 

Loading

Leave a Reply

Your email address will not be published. Required fields are marked *