ವರ್ಗಾವಣೆ ವಿಚಾರವಾಗಿ ನಮ್ಮ ಕಚೇರಿಯಿಂದ ಯಾವ ಪತ್ರ ಹೋಗಿಲ್ಲ: ಸಚಿವ ಚಲುವರಾಯಸ್ವಾಮಿ

ಮಂಡ್ಯ: KSRTC ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಸಂಬಂಧ ಸ್ಪಷ್ಟನೆ ನೀಡಿದ ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ವರ್ಗಾವಣೆ ವಿಚಾರವಾಗಿ ನಮ್ಮ ಕಚೇರಿಯಿಂದ ಯಾವ ಪತ್ರ ಹೋಗಿಲ್ಲ. ಜಗದೀಶ್ ಸಂಬಂಧಿಕರು ವರ್ಗಾವಣೆ ವಾಪಸ್ಗೆ ಮನವಿ ಮಾಡಿದ್ದರು. ನಾನು ಕರೆ ಮಾಡಿ ಏನಾಗಿದೆ ಎಂದು ಮಾಹಿತಿ ಪಡೆದಿದ್ದೇನೆ. ತನಿಖೆ ಮಾಡಿ ವರದಿ ಕೊಡುವಂತೆ ಹೇಳಿದ್ದೆ. ನಂತರ KSRTC ಚಾಲಕ ಜಗದೀಶ್ ಮಾವ ಮತ್ತೆ ಕರೆ ಮಾಡಿದ್ದರು. ಎರಡು ದಿನ ಬಿಡಿ ಎಂದು ಜಗದೀಶ್ ಮಾವನವರಿಗೆ ನಾನೇ ತಿಳಿಸಿದ್ದೆ. ಬಳಿಕ ವರ್ಗಾವಣೆ ಹಿಂಪಡೆಯದಿದ್ದರೆ ವಿಷ ಕುಡಿಯುತ್ತೇನೆ ಎಂದು ಹೇಳಿದ್ದಾಗಿ ತಿಳಿದುಬಂದಿದೆ. ನಂತರ ಆತ್ಮಹತ್ಯೆಗೆ ಯತ್ನಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಅಥವಾ ಮೈಸೂರಿಗೆ ಶಿಫ್ಟ್ ಮಾಡಬೇಕಿತ್ತು. ಆಗ ಮಾಜಿ ಸಿಎಂ ಕರೆಮಾಡಿ ಬರುವವರೆಗೂ ಸ್ಥಳಾಂತರಿಸಬೇಡಿ ಎಂದಿದ್ದಾರೆ. ನಂತರ ಮಾಜಿ ಶಾಸಕ ಸುರೇಶ್ ಗೌಡ, ಅವರ ಪತ್ನಿ ಹೋಗಿ ತಡೆಯುತ್ತಾರೆ. ನಂತರ ಪೊಲೀಸರ ರಕ್ಷಣೆಯಲ್ಲಿ ಜಗದೀಶ್ನನ್ನು ಆಸ್ಪತ್ರೆಗೆ ಶಿಫ್ಟ್ ಮಾಡುತ್ತಾರೆ ಎಂದರು.

Loading

Leave a Reply

Your email address will not be published. Required fields are marked *