ಒಂದೇ ಒಂದು ಕೋಮುಗಲಭೆ, ಹಿಂಸಾಚಾರವೂ ಕೇರಳದಲ್ಲಿ ನಡೆದಿಲ್ಲ: ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರಂ: ದೇಶದಲ್ಲೇ ಅತ್ಯುತ್ತಮವಾದ ಕಾನೂನು ಸುವ್ಯವಸ್ಥೆ (Kerala Law And Order) ಕೇರಳದಲ್ಲಿದೆ. ಕಳೆದ ಕೆಲ ವರ್ಷಗಳಿಂದ ಯಾವುದೇ ಕೋಮುಗಲಭೆಗಳು ಕೇರಳದಲ್ಲಿ ನಡೆದಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ (Pinarayi Vijayan) ಹೇಳಿದ್ದಾರೆ.

ಖಾಸಗಿ ವಾಹಿನಿಯೊಂದರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲೇ ಅತ್ಯುತ್ತಮವಾದ ಕಾನೂನು ವ್ಯವಸ್ಥೆಯನ್ನು ನಾವು ಹೊಂದಿದ್ದೇವೆ. ಕಳೆದ ಕೆಲ ವರ್ಷಗಳಿಂದ ಒಂದೇ ಒಂದು ಕೋಮುಗಲಭೆ (Communal Violence), ಹಿಂಸಾಚಾರವೂ ಅಲ್ಲಿ ನಡೆದಿಲ್ಲ ಎಂದು ಒತ್ತಿ ಹೇಳಿದ್ದಾರೆ.

ಇತ್ತೀಚೆಗಷ್ಟೇ ಕೇರಳ ದೇಶದ ಮೊದಲ ಇ-ಆಡಳಿತ (E Governance) ರಾಜ್ಯ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದು, ಮೈಲಿಗಲ್ಲು ಸಾಧಿಸಿದೆ. ಇ-ಆಡಳಿತದ ಮೂಲಕ ನಾವು ಪಾರದರ್ಶಕತೆ, ದಕ್ಷತೆ ಮತ್ತು ಸಾರ್ವಜನಿಕ ಒಳಗೊಳ್ಳುವಿಕೆಯನ್ನು ಸಾಧಿಸುತ್ತಿದ್ದೇವೆ. ತಡೆರಹಿತ ಸಾರ್ವಜನಿಕ ಸೇವೆಗಳನ್ನು ಕಲ್ಪಿಸಲು ತಂತ್ರಜ್ಞಾನವನ್ನ ಸಮರ್ಪಕವಾಗಿ ಬಳಸಿಕೊಳ್ಳುತ್ತಿದ್ದೇವೆ. 900ಕ್ಕೂ ಹೆಚ್ಚು ಸೇವೆಗಳು ಆನ್‌ಲೈನ್‌ನಲ್ಲೇ ಲಭ್ಯವಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Loading

Leave a Reply

Your email address will not be published. Required fields are marked *