ಹೆಚ್.ಡಿ.ಕುಮಾರಸ್ವಾಮಿ ಪೆನ್ಡ್ರೈವ್ನಲ್ಲಿ ಏನೂ ಇಲ್ಲ ಎಂದು ಬೆಂಗಳೂರು ನಗರದ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಅವರು ಖಾಲಿ ಪೆನ್ಡ್ರೈವ್ ತೋರಿಸಿ ಯಾಮಾರಿಸುತ್ತಿದ್ದಾರೆ. ಪೆನ್ಡ್ರೈವ್ ತೆಗೆದು ತೋರಿಸಿ ಮತ್ತೆ ಜೇಬಿಗೆ ಹಾಕಿಕೊಳ್ಳುತ್ತಾರೆ. ಒಂದು ವಾರದಿಂದ ಹೆಚ್.ಡಿ.ಕುಮಾರಸ್ವಾಮಿ ಇದನ್ನೇ ಮಾಡುತ್ತಿದ್ದಾರೆ. ಪೆನ್ಡ್ರೈವ್ನಲ್ಲಿ ಏನಾದರೂ ಇದ್ದರೆ ಇಷ್ಟೊತ್ತಿಗೆ ತೋರಿಸುತ್ತಿದ್ದರು ಎಂದರು.