ಅಡತಡೆ ಮಾಡುತ್ತಿರುವ ಬಿಜೆಪಿ ವರ್ತನೆಯನ್ನು ಜನ ನೋಡುತ್ತಿದ್ದಾರೆ: ಈಶ್ವರ ಖಂಡ್ರೆ

ಬೀದರ್‌ : ಕರ್ನಾಟಕ ರಾಜ್ಯದಲ್ಲಿ 7ಲಕ್ಷ ಟನ್‌ ಅಕ್ಕಿ ಇದ್ದರೂ ಅದನ್ನು ಕೇಂದ್ರ ಸರ್ಕಾರ ಮುಚ್ಚಿಸಿಟ್ಟಿದೆ. ಇರುವ ಅಕ್ಕಿಯನ್ನು ಗೋದಾಮುಗಳಲ್ಲಿ ಮುಚ್ಚಿಟ್ಟಿದ್ದಾರೆ. ನಮ್ಮ ಕಾರ್ಯಕ್ರಮಕ್ಕೆ ಅಡತಡೆ ಮಾಡುತ್ತಿರುವ ಬಿಜೆಪಿ ವರ್ತನೆಯನ್ನು ಜನ ನೋಡುತ್ತಿದ್ದಾರೆ ಎಂದು ಅರಣ್ಯ, ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಆರೋಪಿಸಿದರು.

ಅವರು ನಗರದಲ್ಲಿ ಭೇಟಿಯಾದ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿ, ಕರ್ನಾಟಕ ಸರ್ಕಾರಕ್ಕೆ ಎಫ್‌ಸಿಐ ಅವರು ಅಕ್ಕಿ ಒದಗಿಸುವ ಭರವಸೆ ಕೊಟ್ಟನಂತರವೂ ಬಹಿರಂಗ ಹರಾಜಿನಲ್ಲಿ ರಾಜ್ಯ ಸರ್ಕಾರದವರಿಗೆ ಪರವಾನಿಗೆ ಕೊಡೋದಿಲ್ಲ ಎಂದು ಕೇಂದ್ರ ಬಿಜೆಪಿ ಸರ್ಕಾರ ಹೇಳುತ್ತಿದೆ ಎಂದರು. ರಾಜ್ಯದಲ್ಲಿ ಎಲ್ಲಿಯವರೆಗೆ ಅಕ್ಕಿ ವ್ಯವಸ್ಥೆ ಆಗುವದಿಲ್ಲವೋ, ಅಲ್ಲಿಯವರೆಗೆ ಬಡ ಜನರಿಗೆ ಧನಸಹಾಯ ಮಾಡುತ್ತೇವೆ. ಮೂರು ತಿಂಗಳಲ್ಲಿ ಅಕ್ಕಿ ಪೂರೈಸಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದರು.

 

Loading

Leave a Reply

Your email address will not be published. Required fields are marked *