ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರಿನ ಆಂಜನೇಯಸ್ವಾಮಿ ದೇಗುಲದಲ್ಲಿ JDS ಮುಖಂಡ ಅಪ್ಪುಗೌಡ ಹತ್ಯೆಗೆ ಯತ್ನ ನಡೆದಿದೆ. ರಾಜಕೀಯ ವೈಷಮ್ಯಕ್ಕೆ ಮದ್ದೂರು ಪುರಸಭೆ ಜೆಡಿಎಸ್ ಸದಸ್ಯೆ ಪ್ರಿಯಾಂಕಾ ಪತಿ ಅಪ್ಪುಗೌಡರ ಮೇಲೆ ಡ್ಯಾಗರ್ನಿಂದ ಚುಚ್ಚಿ,
ಇಬ್ಬರು ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ. ಗಾಯಗೊಂಡ JDS ಮುಖಂಡ ಅಪ್ಪುಗೌಡ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಮದ್ದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.