ಬಿಜೆಪಿ ವಿರುದ್ಧ ಕಿಡಿಕಾರಿದ ಶಾಸಕ ರಾಘವೇಂದ್ರ ಹಿಟ್ನಾಳ್

ಕೊಪ್ಪಳ: ಅಕ್ಕಿ ಬದಲು ಹಣ ನೀಡುವ ನಿರ್ಧಾರಕ್ಕೆ ಬಿಜೆಪಿ ಟೀಕೆ ವಿಚಾರವಾಗಿ ಶಾಸಕ ರಾಘವೇಂದ್ರ ಹಿಟ್ನಾಳ್ ಮಾತನಾಡಿ ಬಿಜೆಪಿಯವರು ಇರುವುದೇ ಟೀಕೆ ಮಾಡುವುದಕ್ಕೆ. ಶಕ್ತಿ ಯೋಜನೆಯಿಂದ ಈಗಾಗಲೇ ಮಹಿಳೆಯರಿಗೆ ಅನುಕೂಲ ಆಗಿದೆ. ಅನ್ನಭಾಗ್ಯ ಯೋಜನೆಯಿಂದ ಸಹ ಬಡವರಿಗೆ ಉಪಯೋಗ ಆಗುತ್ತೆ. ಟೀಕೆ ಮಾಡುವವರು ಅನ್ನಭಾಗ್ಯ ಫಲಾನುಭವಿಗಳಲ್ಲ. ಎಲ್ಲ ಕಡೆ ಕೇಳಿದರೂ ಅಕ್ಕಿ ಸಿಕ್ಕಿಲ್ಲ, ಹೀಗಾಗಿ ಹಣ ನೀಡುತ್ತಿದ್ದೇವೆ. ಬಡವರು ನಮ್ಮ ಯೋಜನೆ ಸದುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮುಂದೆ ಬರುವ ಚುನಾವಣೆಯಲ್ಲೂ ಬಿಜೆಪಿಗೆ ಜನ ಬುದ್ಧಿ ಕಲಿಸುತ್ತಾರೆ. ಬಿಜೆಪಿಯವರು ಏನು ಅವಾಂತರ ಮಾಡಿದ್ದಾರೆ ಅನ್ನೋದು ಗೊತ್ತು. ಕೇಂದ್ರದ ಬೆಲೆ ಏರಿಕೆ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಶಾಸಕ ರಾಘವೇಂದ್ರ ಹಿಟ್ನಾಳ್ ಕಿಡಿಕಾರಿದ್ದಾರೆ.

Loading

Leave a Reply

Your email address will not be published. Required fields are marked *