ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ರಾಹುಲ್ ಗಾಂಧಿ ಚಾಲನೆ ನೀಡಿದರು. ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ವೇದಿಕೆ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಕೆ.ವೆಂಕಟೇಶ್, ಕೃಷ್ಣ ಭೈರೇಗೌಡ, ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ ಉಪಸ್ಥಿತರಿದ್ದಾರೆ.