ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ: ಶಾಲಾ-ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರವೂ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ  ರಜೆ ಘೋಷಿಸಲಾಗಿದೆ.
ಮಳೆ ಕಾರಣಕ್ಕೆ ಸತತ ಮೂರು ದಿನಗಳಿಂದ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹವಾಮಾನ ಇಲಾಖೆ ಮಳೆ ಮುಂದುವರಿಯುವ ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.6 ರಂದು ರಜೆ ಘೋಷಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತಿ ವಹಿಸಬೇಕು ಎಂದು ಎಚ್ಚರಿಕೆ ಸಹ ನೀಡಲಾಗಿದೆ.

Loading

Leave a Reply

Your email address will not be published. Required fields are marked *