ಕರಾವಳಿ ಭಾಗದಲ್ಲಿ ಇಂದು ಮಳೆ ನಿರೀಕ್ಷೆ – ಹವಮಾನ ಇಲಾಖೆ

ಬೆಂಗಳೂರು:- ಹವಾಮಾನ ಇಲಾಖೆಯು ಮಾಹಿತಿ ನೀಡಿ, ಇಂದು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆ ಆಗುವ ನಿರೀಕ್ಷೆ ಇದೆ ಎಂದಿದೆ.

ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ದೈನಂದಿನ ವರದಿ ಬಿಡುಗಡೆ ಮಾಡಿದ್ದು ಸೋಮವಾರದಂದು ಈ ಪ್ರಕಾರ ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು. ಅದು ಗುಡುಗು ಸಹಿತ ಮಳೆಯೂ ಬೀಳಬಹುದು. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಕಂಡು ಬರಲಿದೆ ಎನ್ನುವ ಮಾಹಿತಿ ನೀಡಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಅಂದರೆ ಮಂಗಳವಾರದಂದು ಕರಾವಳಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯ ವಾತಾರವಣ ಇಲ್ಲ ಎಂದು ತಿಳಿಸಲಾಗಿದೆ.

ಸೋಮವಾರದಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆಯಿದೆ. ಆದರೆ ಭಾರೀ ಮಳೆಯ ಮುನ್ನೆಚ್ಚರಿಕೆಯನ್ನೇನೂ ಹವಾಮಾನ ಇಲಾಖೆ ನೀಡಿಲ್ಲ.

ಕರ್ನಾಟಕದ ತಾಪಮಾನದಲ್ಲೂ ಅಂತಹ ಬದಲಾವಣೆ ಏನೂ ಕಂಡು ಬರುವುದಿಲ್ಲ. ರಾಜ್ಯ ಸಮತಟ್ಟಾದ ಪ್ರದೇಶಗಳಲ್ಲಿ ಉತ್ತರ ಕರ್ನಾಟಕದ ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 13.9 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದೆ.

ಬೆಂಗಳೂರು ಮಹಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಮವಾರ ಮಳೆ ಬರುವ ವಾತಾವರಣವಿದೆ. ಅದೂ ಹಗುರ ಮಳೆ ಆಗಬಹುದು ಎನ್ನುವ ಮುನ್ಸೂಚನೆಯನ್ನು ನೀಡಲಾಗಿದೆ.

ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಇಲ್ಲವೇ ರಾತ್ರಿ ಹೊತ್ತಿಗೆ ಹಗುರವಾಗಿ ಮಳೆಯಾಗುವ ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವವೇ ಮಂಜು ಮುಸುಕಿದ ಸನ್ನಿವೇಶ ಕಂಡು ಬರಲಿದೆ. ಬೆಂಗಳೂರಿನ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ನಷ್ಟಿರಲಿದೆ.

Loading

Leave a Reply

Your email address will not be published. Required fields are marked *