ಬೆಂಗಳೂರು ;- ಆಗಸ್ಟ್ 24ರವರೆಗೆ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಕರಾವಳಿಯ ಕೆಲವೆಡೆ ಮಳೆಯಾಗಿದೆ. ಆಗಸ್ಟ್ 24ರವರೆಗೆ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.