ನಾಳೆ ಸಿಎಂ ಬಸ್ ನಲ್ಲಿ ಒಂದು ರೌಂಡ್ ಹಾಕ್ತರಷ್ಟೇ, ಟಿಕೇಟ್ ಕೊಡಲ್ಲ: ಸಾರಿಗೆ ಸಚಿವ

ಬೆಂಗಳೂರು: ನಾಳೆ ಬಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಟಿಕೆಟ್ ವಿತರಣೆ ಮಾಡಲ್ಲ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಸಾರಿಗೆ ಸಚಿವರು, ವಿಧಾನಸೌಧದಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಅವರು, ಮಹಿಳೆಯರಿಗೆ ಉಚಿತ ಟಿಕೆಟ್ ವಿತರಣೆ ಮಾಡಲಿದ್ದಾರೆ ಎನ್ನಲಾಗಿತ್ತು.

ಇದಕ್ಕೆ ರಾಮಲಿಂಗ ರೆಡ್ಡಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಉಚಿತ ಬಸ್ ನಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಟಿಕೆಟ್ ವಿತರಣೆ ಮಾಡಲ್ಲ. ಬಸ್ ನಲ್ಲಿ ಟಿಕೆಟ್ ಕೊಡಲು ಕಂಡಕ್ಟರ್ ಇರ್ತಾರೆ, ಬಸ್ ಓಡಿಸಲು ಡ್ರೈವರ್ ಇರ್ತಾರೆ. ಉದ್ಘಾಟನೆ ಬಳಿಕ ಬಸ್ ನಲ್ಲಿ ಒಂದು ರೌಂಡ್ ಹೋಗ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

Loading

Leave a Reply

Your email address will not be published. Required fields are marked *