ಧಾರವಾಡ: ಬೆಳಗಾವಿಯಿಂದ ವಂದೇ ಭಾರತ್ ರೈಲು ಸೇವೆ ಬೇಕು ಎನ್ನುವ ಬೇಡಿಕೆ ಇದೆ. ಸಧ್ಯದಲ್ಲೇ ಬೆಳಗಾವಿಯಿಂದಲೂ ವಂದೇ ಭಾರತ್ ಸಂಚಾರ ಶುರು ಮಾಡ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಧಾರವಾಡ ರೈಲ್ವೆ ನಿಲ್ದಾಣದಲ್ಲಿ ಮಾತನಾಡಿದ ಅವರು ‘ ವಂದೇ ಭಾರತ್ ಸ್ವದೇಶಿ ನಿರ್ಮಿತ ರೈಲು, ಈ ಹಿಂದೆ ದೇಶದಲ್ಲಿ ವಿದ್ಯುತ್ ಸಮಸ್ಯೆ ಇತ್ತು. ಆದರೆ, ಇವತ್ತು ವಿದ್ಯುತ್ ರಫ್ತು ಮಾಡೋ ಹಂತಕ್ಕೆ ಬಂದಿದ್ದೇವೆ ಎಂದಿದ್ದಾರೆ.