ಬೆಂಗಳೂರು: ಕೇಂದ್ರ ಸರ್ಕಾರ ಸರ್ವರ್ ಹ್ಯಾಕ್ ಮಾಡಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸತೀಶ್ ಜಾರಕಿಹೊಳಿ ಬಾಯಿ ಚಪಲಕ್ಕೆ ಮಾತನಾಡ್ತಾರೆ ಅಷ್ಟೇ. ಸರ್ವರ್ ಸ್ಟ್ರಾಂಗ್ ಮಾಡಿಕೊಳ್ಳಬೇಕೆಂದು ಇವರಿಗೆ ಗೊತ್ತಿಲ್ವಾ? ಕೇಂದ್ರ 5 ಕೆಜಿ ಅಕ್ಕಿ ಕೊಡುತ್ತಿದೆ, ಈ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿದೆ. 35 ಲಕ್ಷ ಬಿಲ್ ಕಟ್ಟಬೇಕೆಂದು VTU ವಿಸಿ ಬಾಯಿ ಬಡ್ಕೊತ್ತಿದ್ದಾರೆ. ಕೋಲಾರದಲ್ಲಿರುವ ಡಿಸಿಸಿ ಬ್ಯಾಂಕ್ನಲ್ಲಿ ಗಲಾಟೆ ಆಗಿದೆ. ತನಿಖೆ ನಡೆದರೆ ಯಾರ ಯಾರು ಜೈಲಿಗೆ ಹೋಗುತ್ತಾರೆ ಗೊತ್ತಿಲ್ಲ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.