ಬೆಂಗಳೂರು: ನಾಳೆ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯ ಸಂಸ್ಕಾರಕ್ಕೆ ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ. ಇಂದು ರಾತ್ರಿ 11 ಗಂಟೆ ಸುಮಾರಿಗೆ ಏರ್ ಪೋರ್ಟ್ ಗೆ ಮೃತದೇಹ ಬರಲಿದೆ. 12 ಗಂಟೆ ವೇಳೆಗೆ ಮಲ್ಲೇಶ್ವರಂ ಮನೆಗೆ ತಲುಪಲಿದ್ದು, ಮನೆಯ ಬಳಿಯೇ ನಾಳೆ ಮಧ್ಯಾಹ್ನದ ವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.