ಡಿಕೆಶಿ ವಿರುದ್ಧದ ತನಿಖೆಗೆ ಸ್ಪೀಕರ್‌ ಅನುಮತಿ ಬೇಕಿರಲಿಲ್ಲ: ಕಾಗೇರಿ

ಬೆಂಗಳೂರು:- ಡಿಕೆಶಿ ವಿರುದ್ಧ ತನಿಖೆಗೆ ಸ್ಪೀಕರ್‌ ಅನುಮತಿ ಬೇಕಿರಲಿಲ್ಲ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಚಾರದಲ್ಲಿ ಸಭಾಧ್ಯಕ್ಷ ಸ್ಥಾನದ ಕುರಿತು ಕಾಂಗ್ರೆಸ್‌ ಪ್ರಸ್ತಾಪಿಸಿರುವುದು ದುರ್ದೈವದ ಸಂಗತಿಯಾಗಿದ್ದು, ಸಿಬಿಐ ತನಿಖೆಗೆ ವಹಿಸಿರುವ ವಿಷಯ ಸಭ್ಯಾಧ್ಯಕ್ಷರ ವ್ಯಾಪ್ತಿಗೆ ಬರುವುದಿಲ್ಲ ಎಂದಕು.

ಸಚಿವ ಸಂಪುಟ ಕೈಗೊಂಡಿರುವ ತೀರ್ಮಾನ ಸರಿಯಲ್ಲ. ಡಿ.ಕೆ.ಶಿವಕುಮಾರ್‌ ಬಗ್ಗೆ ಸಿಬಿಐ ತನಿಖೆ ಮುಂದುವರಿಯಬೇಕು. ಪ್ರಕರಣದಲ್ಲಿ ಸಭಾಧ್ಯಕ್ಷರ ಪಾತ್ರ ಏನೂ ಇಲ್ಲ. ಆದರೂ ಕಾಂಗ್ರೆಸ್‌ ಆ ಸ್ಥಾನ ಕುರಿತು ಹೇಳಿಕೆ ನೀಡಿದೆ ಎಂದರು.

ಸಚಿವ ಸಂಪುಟದ ನಿರ್ಣಯವನ್ನು ಖಂಡಿಸುತ್ತೇನೆ ಮತ್ತು ಆ ನಿರ್ಣಯ ಕೈಗೊಳ್ಳಲು ಸಭಾಧ್ಯಕ್ಷ ಸ್ಥಾನವನ್ನು ಅವರು ಬಳಕೆ ಮಾಡಿಕೊಂಡಿರುವುದು ದುರ್ದೈವದ ಸಂಗತಿ. ಸಭಾಧ್ಯಕ್ಷರ ಅನುಮತಿಯ ವ್ಯಾಪ್ತಿಯಲ್ಲಿ ಬಾರದೆ ಇರುವ ವಿಷಯಕ್ಕೆ ಸಭಾಧ್ಯಕ್ಷರು ಅನುಮತಿ ಕೊಟ್ಟಿಲ್ಲ ಎಂಬ ಕಾರಣ ಹೇಳಿ ಸಚಿವ ಸಂಪುಟ ನಿರ್ಣಯ ಮಾಡಿದ್ದು ಕಾಂಗ್ರೆಸ್‌ ಸರ್ಕಾರದ ಅಕ್ಷಮ್ಯ ಅಪರಾಧ ಎಂದು ಟೀಕಿಸಿದರು.

Loading

Leave a Reply

Your email address will not be published. Required fields are marked *