ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸೌತ್ಸಿಟಿಯಲ್ಲಿ ನಡೆದಿದೆ. ಮೊಹಮ್ಮದ್ ಜಿಯಾಸುದ್ದಿನ್ ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಮೊಹಮ್ಮದ್ ಜಿಯಾಸುದ್ದಿನ್ ತನ್ನ ಪೋಷಕರ ಜೊತೆಗೆ ಗೆಳೆಯನ ಮನೆಗೆ ಬಂದಿದ್ದ. ಮೃತನ ಕಟುಂಬ ಮತ್ತು ಗೆಳೆಯ ಮೂಲತಃ ಅಸ್ಸಾಂ ಮೂಲದವರಾಗಿದ್ದು, ಒಬ್ಬರಿಗೊಬ್ಬರು ಚೆನ್ನಾಗಿ ಪರಿಚಯವಿದ್ದ ಹಿನ್ನೆಲೆ ಗೆಳೆಯನ ಮನೆಗೆ ಬಂದಿದರು. ಖಿನ್ನತೆಯಿಂದ ಬಳಲುತ್ತಿದ್ದ ಮೃತ ವ್ಯಕ್ತಿ ಆಸ್ಪತ್ರೆಗೆ ಹೋಗಲು ಸ್ನೇಹಿತನನ್ನು ಕರೆದೊಯ್ಯಲು ಬಂದಿದ್ದ. ಆದರೆ ಇದ್ದಕ್ಕಿದ್ದಂತೆ ಗೆಳೆಯನ ಮನೆಯ 19ನೇ ಫ್ಲೋರ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಪುಟ್ಟೇನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.