ಕಾವೇರಿ ಬಿಕ್ಕಟ್ಟು ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶ ದುರದೃಷ್ಟಕರ: ಎಂಬಿ ಪಾಟೀಲ್

ಬೆಂಗಳೂರು: ಕಾವೇರಿ ಬಿಕ್ಕಟ್ಟು ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶ ದುರದೃಷ್ಟಕರ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡೋದು ಕಷ್ಟ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು.ಬೆಂಗಳೂರಿನಲ್ಲಿ ಮಾತನಾಡಿ, ಹೀಗಾದಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ಆಗಬಹುದು. ನಮಗೆ ಸಂಕಷ್ಟ ಸೂತ್ರ ಇಲ್ಲ. ವೈಜ್ಞಾನಿಕ ಸೂತ್ರವನ್ನ ಕೂಡಲೇ ಮಾಡಬೇಕು ಎಂದು ಆಗ್ರಹಿಸಿದರು.

ಕಾವೇರಿ ವಿಚಾರವಾಗಿ ಕೂಡಲೇ ಕೇಂದ್ರ ಜಲಶಕ್ತಿ ಇಲಾಖೆ, ಪ್ರಾಧಿಕಾರ ಮಧ್ಯಪ್ರವೇಶಿಸಬೇಕು. ತಜ್ಞರ ತಂಡ ಕರೆಸಿ ಪರಿಶೀಲನೆ ಮಾಡಿಸಬೇಕು. ನಂತರ ನೀರು ಬಿಡೋ ಬಗ್ಗೆ ತೀರ್ಮಾನ ಮಾಡಬೇಕು ಎಂದು ಎಂ.ಬಿ.ಪಾಟೀಲ್ ಆಗ್ರಹಿಸಿದರು. ಕಾವೇರಿ ವಿಚಾರವಾಗಿ, ಸರ್ಕಾರ ನಿರ್ಲಕ್ಷ್ಯ ಹೇಗೆ ಮಾಡುತ್ತದೆ? ನಾರಿಮನ್ ಇಲ್ಲ, ಅವರು ಇದ್ದಾಗ ದೊಡ್ಡ ಶಕ್ತಿ ಇತ್ತು. ಇವಾಗಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿಕೊಳ್ಳಬೇಕು. ಅಧ್ಯಯನಕ್ಕೆ ತಜ್ಞರ ತಂಡವನ್ನು ಕಳಿಸಬೇಕು ಎಂದು ಒತ್ತಾಯಿಸಿದರು.

Loading

Leave a Reply

Your email address will not be published. Required fields are marked *