ರಾಡ್’ನಿಂದ ಕಣ್ಣು ಕಿತ್ತು ನರ್ಸಿಂಗ್ ವಿದ್ಯಾರ್ಥಿನಿಯ ಭೀಕರ ಕೊಲೆ.!

ಹೈದರಾಬಾದ್: ತನ್ನ ಸೋದರ ಮಾವನೊಂದಿಗೆ ಜಗಳವಾಡಿಕೊಂಡು ಮನೆಯಿಂದ ಹೊರಗೆ ಹೋಗಿದ್ದ ನರ್ಸಿಂಗ್ ವಿದ್ಯಾರ್ಥಿನಿ ಯೊಬ್ಬಳು ಭೀಕರವಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ತೆಲಂಗಾಣದಲ್ಲಿ (Telangana) ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ತೆಲಂಗಾಣದ ವಿಕಾರಾಬಾದ್ಜಿ ಜಿಲ್ಲೆಯ ಕಾಲಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತ ಯುವತಿಯನ್ನ ಕಂಡ್ಲಾಪುರ ನಿವಾಸಿ ಸಿರಿಶಾ (19) ಎಂದು ಗುರುತಿಸಲಾಗಿದೆ. ತನ್ನ ಸೋದರ ಮಾವನೊಂದಿಗೆ ಜಗಳವಾಡಿಕೊಂಡು ಮನೆಬಿಟ್ಟು ಹೋಗಿದ್ದ ಸಿರಿಶಾ ಭಾನುವಾರ ನೀರಿನ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ಸಿರಿಶಾಳನ್ನ ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ಗ್ರಾಮದ ನೀರಿನ ಹೊಂಡಕ್ಕೆ ಎಸೆದಿದ್ದಾರೆ. ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಭೇಟಿ ನೀಡಿ ಶವವನ್ನ ಹೊರತೆಗೆಯಲಾಗಿದೆ ಎಂದು ಪರಿಗಿ ಸಬ್ ಇನ್ಸ್ಪೆಕ್ಟರ್ (SI) ವಿಠ್ಠಲ್ ರೆಡ್ಡಿ ತಿಳಿಸಿದ್ದಾರೆ. ಘಟನೆ ನಂತರ ವಿಕಾರಾಬಾದ್ ಎಸ್ಪಿ ಎನ್.ಕೋಟಿ ರೆಡ್ಡಿ ಅವರು ತನಿಖೆ ನಡೆಸಲು ವಿಶೇಷ ತಂಡ ರಚಿಸಿದ್ದಾರೆ. ಮೃತ ಸಿರಿಶಾಳ ಸೋದರ ಮಾವನನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Loading

Leave a Reply

Your email address will not be published. Required fields are marked *