ಪ್ರೋಟೋಕಾಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಥಾವರ್ ಚಂದ್ ಗೆಹ್ಲೋಟ್ʼಗೆ ಫ್ಲೈಟ್ ಮಿಸ್

ಬೆಂಗಳೂರು ;- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೈದರಾಬಾದ್​ಗೆ ತೆರಳು ನಿನ್ನೆ ಮಧ್ಯಾಹ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು, ಆದ್ರೆ, ಇನ್ನೂ ಏರ್‌ ಏಷ್ಯಾ ವಿಮಾನ ಹೊರಡಲು ಸಮಯ ಇದೆ ಎಂದು ಸಿಬ್ಬಂದಿ ರಾಜ್ಯಪಾರನ್ನು ಕರೆದುಕೊಂಡು ಹೋಗಿ ವಿಐಪಿ ಲಾಂಜ್​ನಲ್ಲಿ ಕೂರಿಸಿದ್ದಾರೆ.

ಆದ್ರೆ, ಟೈಮ್​ ಆಗಿರುವುದು ಗಮನಕ್ಕೆ ಬಂದಿಲ್ಲ. ಇದರಿಂದ ವಿಮಾನ ಸರಿಯಾದ ಸಮಯಕ್ಕೆ ಟೇಕಫ್​ ಆಗಿ ಹೋಗಿದೆ. ಪ್ರೋಟೋಕಾಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿಮಾನ ತಪ್ಪಿದೆ. ಬಳಿಕ ಅಧಿಕಾರಿಗಳು ಮತ್ತೊಂದು ವಿಮಾನದ ಮೂಲಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಹೈದರಾಬಾದ್​ಗೆ ಕಳುಹಿಸಿಕೊಟ್ಟಿದ್ದಾರೆ.

ಮಧ್ಯಾಹ್ನ 02 ಗಂಟೆಯ ವಿಮಾನದಲ್ಲಿ ಹೋಗಲು ನಿಲ್ದಾಣಕ್ಕೆ 1:30ಕ್ಕೆ ಆಗಮಿಸಿದ್ದರು. ಸಿಬ್ಬಂದಿ ವಿಮಾನದಲ್ಲಿ ಲಗೇಜ್ ಇಟ್ಟು ಬಂದಿದ್ದರು. ಆದ್ರೆ, ಟೈಮ್​ ಇದೆ ಎಂದು ಪ್ರೋಟೋಕಾಲ್ ಸಿಬ್ಬಂದಿ ರಾಜ್ಯಪಾಲರನ್ನು ವಿಐಪಿ ಲಾಂಜ್ ನಲ್ಲಿ ಕೂರಿಸಿದ್ದಾರೆ. ಇತ್ತ ಸಮಯವಾಗಿದ್ದರಿಂದ ವಿಮಾನ ಟೇಕಫ್ ಆಗಿ ಹೋಗಿದೆ. ಒಂದು ನಿಮಿಷ ತಡವಾಗಿ ಬಂದಿದ್ದಕ್ಕೆ ಗರ್ವನರ್​ಗೆ ವಿಮಾನ ಮಿಸ್ ಆಗಿದೆ. ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ರಾಜ್ಯಪಾಲರು ಹಾಗೂ ಹಿರಿಯ ಅಧಿಕಾರಿಗಳು ಗರಂ ಆಗಿದ್ದು, ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

Loading

Leave a Reply

Your email address will not be published. Required fields are marked *