ರಾಮನಗರ: ಚುನಾವಣೆ ವೇಳೆ ಹಂಚಲಾಗಿದ್ದ ಕುಕ್ಕರ್ ಸ್ಫೋಟಗೊಂಡು ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ರಾಮನಗರದಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಮಹಾಲಕ್ಷ್ಮಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚುನಾವಣೆಯಲ್ಲಿ ಹಂಚಲಾಗಿದ್ದ ಕುಕ್ಕರ್ ನಿಂದ ಅಡುಗೆ ಮಾಡುತ್ತಿದ್ದಾಗ ಕುಕ್ಕರ್ ಏಕಾಏಕಿ ಸ್ಫೋಟಗೊಂಡಿದೆ.
ಬಾಲಕಿ ಗಾಯಗೊಂಡಿದ್ದಾಳೆ.
ಗಾಯಾಳು ಬಾಲಕಿಗೆ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡ ವೇದ ಎಂಬುವವರು ಈ ಕುಕ್ಕರ್ ಹಂಚಿದ್ದರು ಎಂಬ ಆರೋಪ ಕೇಳಿಬಂದಿದೆ.