ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ದೊಡ್ಡ ಹುನ್ನಾರ ಮಾಡಿದೆ; ಬಿಸಿ ನಾಗೇಶ್

ಬೆಂಗಳೂರು: ಎನ್ಇಪಿ ರದ್ದು ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಮಾಜಿ ಸಚಿವ ಬಿ.ಸಿ.ನಾಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಹುತೇಕ ರಾಜಕಾರಣಿಗಳು, ಅಧಿಕಾರಿಗಳು ಶಾಲೆ ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಿಸಬೇಕು ಅಂತ ಷಡ್ಯಂತ್ರ. ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಸ್.ಎಸ್.ಮಲ್ಲಿಕಾರ್ಜುನ, ಎಂ.ಬಿ.ಪಾಟೀಲ್ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದಾರೆ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ದೊಡ್ಡ ಹುನ್ನಾರ ಮಾಡಿದೆ. ಸಿದ್ದರಾಮಯ್ಯ ಎನ್ಇಪಿ ತೆಗೆದುಹಾಕುವ ಮೊದಲು ಜನರ ಮುಂದಿಡಲಿ ಅದರಲ್ಲಿ ಏನೆಲ್ಲ ಲೋಪದೋಷಗಳಿವೆ ಎಂದು ಬಹಿರಂಗಪಡಿಸಬೇಕು. ಖಾಸಗಿ ಸಂಸ್ಥೆಗಳ ಒತ್ತಡಕ್ಕೆ ಮಣಿದು ಈ ರೀತಿ ನಡೆದುಕೊಳ್ಳಬಾರದು ಎಂದು ಹೇಳಿದರು.

Loading

Leave a Reply

Your email address will not be published. Required fields are marked *