ಮೈಸೂರು: ರಾಜ್ಯದಲ್ಲಿ ಹೊಸದಾಗಿ ಮದ್ಯದಂಗಡಿಗೆ ಅವಕಾಶವಿಲ್ಲ. ಡಿಕೆ ಶಿವಕುಮಾರ್ ಅವರದ್ದು ಅಭಿಪ್ರಾಯ ಅಷ್ಟೇ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಹೊಸ ಬಾರ್ ಲೈಸೆನ್ಸ್ ಕೊಡುವ ವಿಚಾರ ಸರ್ಕಾರದ ಮುಂದೆ ಸದ್ಯಕ್ಕೆ ಇಲ್ಲ.
ಡಿ.ಕೆ ಶಿವಕುಮಾರ್ ಎಲ್ಲೂ ಕೂಡ ಹೊಸ ಲೈಸೆನ್ಸ್ ಕೊಡುತ್ತೇವೆ ಎಂದು ಹೇಳಿಲ್ಲ. ಸದ್ಯಕ್ಕೆ ಆ ವಿಚಾರದಲ್ಲಿ ಯಾವ ಚರ್ಚೆಗಳು ಬೇಡ. ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಹೊಸ ಲೈಸೆನ್ಸ್ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.