ಮಹಾರಾಣಿ ಕಾಲೇಜ್​ ಬಳಿ ಇರುವ​ ಅಂಡರ್​ ಪಾಸ್​​ನಲ್ಲಿ ಸಿಲುಕಿದ ಲಾರಿ

ರಾಜಧಾನಿ ಬೆಂಗಳೂರಿನ ಅಂಡರ್ ಪಾಸ್ ನಲ್ಲಿ ಲಾರಿ ಸಿಲುಕಿರುವ ಘಟನೆ ಜರುಗಿದೆ. ಮೈಸೂರು ಬ್ಯಾಂಕ್ ಕಡೆಯಿಂದ ಬಂದ ಲಾರಿಯೊಂದು ಮಹಾರಾಣಿ ಕಾಲೇಜ್​ ಬಳಿ ಇರುವ​ ಅಂಡರ್​ ಪಾಸ್​​ನಲ್ಲಿ ಸಿಲುಕಿಕೊಂಡಿದೆ. ಈ ಹಿನ್ನೆಲೆ ಉಪ್ಪಾರಪೇಟೆ ಸಂಚಾರಿ ಪೊಲೀಸರು ಲಾರಿ ಹೊರ ತೆಗೆಯಲು ಜೆಸಿಬಿ ತರಿಸಿ ಹರಸಾಹಸ ಪಡುತ್ತಿದ್ದಾರೆ. ಸದ್ಯ ಸಂಚಾರಿ ಪೊಲೀಸರು ಅಂಡರ್ ಪಾಸ್ ಬಂದ್ ಮಾಡಿ ಟ್ರಾಫಿಕ್ ಡೈವರ್ಶನ್​​​ ನೀಡಿದ್ದಾರೆ. ಚಾಲುಕ್ಯ ಸರ್ಕಲ್​​ಗೆ ಬರಲು ಫ್ರೀಡಂ ಪಾರ್ಕ್ ಕಡೆಯಿಂದ ಬರಲು ಸಂಚಾರಿ ಪೊಲೀಸರ ಸೂಚನೆ ನೀಡಿದ್ದಾರೆ. ಅಂಡರ್ ಪಾಸ್​​ನಲ್ಲಿ ಲಾರಿ ತೆರಳಲು ಸಾಧ್ಯವಿಲ್ಲ. ಆದರೂ ಲಾರಿ ಬಂದಿರುವುದು ವಿಪರ್ಯಾಸ ಎಂದು ಹೇಳಲಾಗಿದೆ.

Loading

Leave a Reply

Your email address will not be published. Required fields are marked *