ನಮ್ಮ ರಾಜ್ಯ ಸರ್ಕಾರದ ತಪ್ಪುಗಳನ್ನು ಎತ್ತಿ ಹೇಳಲೇಬೇಕಿದೆ: ಸಿ.ಟಿ ರವಿ

ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಶಾಸಕ ಸಿ.ಟಿ ರವಿ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನಾವು ಇದರಲ್ಲಿ ರಾಜಕೀಯ ಮಾಡುತ್ತಿಲ್ಲ. ಆದರೆ ನಮ್ಮ ರಾಜ್ಯ ಸರ್ಕಾರದ ತಪ್ಪುಗಳನ್ನು ಎತ್ತಿ ಹೇಳಲೇಬೇಕಿದೆ ಎಂದರು.

ತಮಿಳುನಾಡು ಸರ್ಕಾರ ಕೇಳುವ ಮೊದಲೇ ಕರ್ನಾಟಕ ಸರ್ಕಾರ ಕಾವೇರಿ ನೀರು ಬಿಟ್ಟಿತ್ತು. ನಂತರದ ದಿನಗಳಲ್ಲಿ ನಮ್ಮ ನೆರವಿಗೆ ಸಿಡಬ್ಲ್ಯುಆರ್ ಸಿ ಬರಲಿಲ್ಲ. ಸುಪ್ರೀಂ ಕೋರ್ಟ್ ನಲ್ಲೂ ಈಗ ತೀರ್ಪು ಬಂತು. ಕೇಳುವ ಮೊದಲೇ ನೀರು ಬಿಟ್ಟಿದ್ದು ಯಾಕೆ? ಎಂದು ಪ್ರಶ್ನಿಸಿದರು.

Loading

Leave a Reply

Your email address will not be published. Required fields are marked *