ಬಿಜೆಪಿ ಸೋಲಿಗೆ ಕಾರಣ ಬಿಚ್ಚಿಟ್ಟ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ

ದಾವಣಗೆರೆ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕಾರಣ ಬಿಚ್ಚಿಟ್ಟು, ಒಳಮೀಸಲಾತಿಯಿಂದ ಕರ್ನಾಟಕದಲ್ಲಿ ಬಿಜೆಪಿ ಸೋಲನುಭವಿಸಿದೆ ಎಂದು ಹೇಳಿದ್ದಾರೆ.

ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕ ರೇಣುಕಾಚಾರ್ಯ, ಕರ್ನಾಟಕದಲ್ಲಿ ಬಿಜೆಪಿ ಸೋಲಿಗೆ ಕೇಂದ್ರ ನಾಯಕರ ತಂತ್ರಗಾರಿಕೆಯೇ ಕಾರಣ, ಒಳಮೀಸಲಾತಿಯಿಂದ 45 ಕ್ಷೇತ್ರಗಳಲ್ಲಿ ಬಿಜೆಪಿ ಸೋಲನುಭವಿಸಿದೆ.

ಬಿಜೆಪಿ ಕೇಂದ್ರ ನಾಯಕರು 72 ಹೊಸಬರಿಗೆ ಟಿಕೆಟ್ ನೀಡಿದ್ದರು. 72 ಹೊಸಬರ ಪೈಕಿ 42 ಜನರು ಚುನಾವಣೆಯಲ್ಲಿ ಸೋತಿದ್ದಾರೆ ಎಂದರು.

ಇನ್ನೂ ಬೆಲೆ ಏರಿಕೆಯ ಸಂದರ್ಭದಲ್ಲಿ ಅಕ್ಕಿ ಕಡಿತ ಮಾಡಿರುವುದು, ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಬಿಜೆಪಿ 66 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು.

Loading

Leave a Reply

Your email address will not be published. Required fields are marked *