ಗಲಾಟೆ ನಿಯಂತ್ರಿಸಲು ಬಂದ ಪೊಲೀಸರ ಜೀಪ್ ಅನ್ನೇ ಕದ್ದ ಕಳ್ಳ..!

ತುಮಕೂರು: ಪೊಲೀಸರ 112 ವಾಹನವನ್ನೆ ಓಡಿಸಿಕೊಂಡು ಪರಾರಿಯಾದ ವ್ಯಕ್ತಿಯನ್ನು ಸಿನಿಮಾ ಸ್ಟೈಲಿ‌ನಲ್ಲಿ ಚೇಸ್ ಮಾಡಿ ಪತ್ತೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಸಿಎಸ್ ಪುರ ಪೊಲೀಸ್ ಠಾಣೆ ಯ ವ್ಯಾಪ್ತಿಯಲ್ಲಿ ಸಹೋದರಿಬ್ಬರ ನಡುವೆ ಗಲಾಟೆ ಆಗ್ತಿತ್ತು. ಈ ವೇಳೆ ಆರೋಪಿ ಸಹೋದರ 112 ಗೆ ಕರೆ ಮಾಡಿದ್ದರಿಂದ ಗ್ರಾಮಕ್ಕೆ ವಾಹನ ಬಂದಿತ್ತು.. ಈ ವೇಳೆ ಆರೋಪಿ ಹಿಂದೆ ಇದ್ದ 112 ಕಾರಿನ ಮೇಲೆ ಕಲ್ಲು ಎತ್ತಿಹಾಕಿದ್ದಾನೆ.

ಇದನ್ನ ಗಮನಿಸಲು 112 ಚಾಲಕ ಹಿಂದೆ ಬಂದಿದ್ದಾನೆ.. ಈ ವೇಳೆ ಮುಂದೆ ಹೋಗಿ ಕಾರು ತೆಗೆದುಕೊಂಡು ಆರೋಪಿ ಎಸ್ಕೇಪ್‌ ಆಗಿದ್ದಾನೆ. ಸತತ ಮೂರು ಗಂಟೆಗಳ ಕಾಲ ಹುಡುಕಾಟ ನಡೆಸಿ ಆರೋಪಿಯನ್ನೂ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತುಮಕೂರು ತಾಲೂಕಿನ ಹೆಬ್ಬೂರು ಬಳಿ ವಾಹನ ಪತ್ತೆಯಾಗಿದ್ದು, ಆರೋಪಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಘಟನೆ ಸಂಭಂಧ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Loading

Leave a Reply

Your email address will not be published. Required fields are marked *