ಬಜರಂಗದಳ ಬ್ಯಾನ್​​ ವಿಚಾರವಾಗಿ ಕಾಂಗ್ರೆಸ್​ನಲ್ಲಿಯೇ ಗೊಂದಲವಿದೆ: ಪ್ರಹ್ಲಾದ್​ ಜೋಶಿ

ಹುಬ್ಬಳ್ಳಿ: ಬಜರಂಗದಳ ಬ್ಯಾನ್​​ ವಿಚಾರವಾಗಿ ಕಾಂಗ್ರೆಸ್​ನಲ್ಲಿಯೇ ಗೊಂದಲವಿದೆ. ನಾವು ಬಜರಂಗದಳವನ್ನು ಬ್ಯಾನ್ ಮಾಡುವುದಿಲ್ಲ ಎಂದು ವೀರಪ್ಪ ಮೊಹ್ಲಿ ಅವರೇ ಸ್ಪಷ್ಟಪಡಿಸಿದ್ದಾರೆ. ಆದರೆ ರಣದೀಪ್​ ಸಿಂಗ್​ ಸುರ್ಜೇವಾಲಾ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾವು ಬ್ಯಾನ್ ಮಾಡಿಯೇ ಮಾಡುತ್ತೇವೆ ಎನ್ನುತ್ತಿದ್ದಾರೆ. ಬಜರಂಗದಳ ಭಯ ಎಷ್ಟ ಇದೆ ಎನ್ನುವುದನ್ನು ಕಾಂಗ್ರೆಸ್‌ನವರು ನೋಡಿಕೊಳ್ಳಿ. ಶ್ರೀ ಲಂಕಾದಲ್ಲಿ ರಾಮ ಭಕ್ತ ಹನುಮಂತ ಹೋಗಿ ಬಾಲಕ್ಕೆ ಬೆಂಕಿ ಹಚ್ಚಿ ಲಂಕಾವನ್ನು ಸುಟ್ಟು ಭಸ್ಮ ಮಾಡಿದ. ಬಜರಂಗಬಲಿಯ ಆಕ್ರೋಶದಿಂದ ಕಾಂಗ್ರೆಸ್ ಭವಿಷ್ಯ ಸುಟ್ಟ ಬೂದಿಯಾಗಲಿದೆ. ಬಜರಂಗದಳ ನಿಷೇಧ ಮಾಡುವುದದ ಬಗ್ಗೆ ಜಗದೀಶ್ ಶೆಟ್ಟರ್ ತಮ್ಮ ನಿಲುವನ್ನು ವ್ಯಕ್ತಪಡಿಸಬೇಕೆಂದು ನಾನು ವಿನಂತಿ ಮಾಡುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದ್ದಾರೆ

Loading

Leave a Reply

Your email address will not be published. Required fields are marked *