ನನ್ನ ಮತ್ತು ಹೆಬ್ಬಾಳ್ಕರ್ ನಡುವೆ ಯಾವುದೇ ಕೋಲ್ಡ್ ವಾರ್ ಇಲ್ಲ – ಸತೀಶ್ ಜಾರಕಿಹೊಳಿ

ಬೆಂಗಳೂರು;- ನನ್ನ ಮತ್ತು ಹೆಬ್ಬಾಳ್ಕರ್ ನಡುವೆ ಯಾವುದೇ ಅಸಮಾಧಾನವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಲಕ್ಷ್ಮೀಹೆಬ್ಬಾಳ್ಕರ್ ಹಾಗು ನನ್ನ ನಡುವೆ ಅಸಮಾಧಾನವಿಲ್ಲ. ಎಲ್ಲವೂ ಊಹಾಪೋಹ. ಯಾವುದೇ ಕೋಲ್ಡ್ ವಾರ್ ಕೂಡ ನಮ್ಮ ಮಧ್ಯೆ ಇಲ್ಲ. ಡಿ.ಕೆ.ಶಿವಕುಮಾರ್ ಯಾಕೆ ಹಸ್ತಕ್ಷೇಪ ಮಾಡ್ತಾರೆ?.‌ ನಾನು ಯಾವ ಹೈಕಮಾಂಡ್​ಗೂ‌ ತಿಳಿಸಿಲ್ಲ. ಸಮಸ್ಯೆ ಇದ್ದರೆ ನಾವೇ ಸರಿಮಾಡಿಕೊಳ್ಳುತ್ತೇವೆ ಎಂದರು.

ಬೆಳಗಾವಿ ಪಾಲಿಕೆಯಲ್ಲಿ ಗೊಂದಲದ ವಿಚಾರವಾಗಿ ಪ್ರತಿಕ್ರಿಯಿಸಿ, ಬೇಕೆಂದೇ ಅಧಿಕಾರಿಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಕೆಲವು ದಾಖಲೆಗಳು ನಾಪತ್ತೆಯಾಗಿವೆ. ಯಾಕೆ, ಏನು ಅಂತ ಕೇಳಿದ್ದೇವೆ. ಅಭಯ್ ಪಾಟೀಲ್ ಬೇಕಂತಲೇ ಆರೋಪ ಮಾಡುತ್ತಿದ್ದಾರೆ. ತಮಗೆ ಕನ್ನಡ ಬರಲ್ಲ, ಅಧಿಕಾರಿಗಳು ಮಾಡಿದ್ದಾರೆ ಅನ್ನುತ್ತಾರೆ. ಆ ಕಡತ ಎಲ್ಲಿಗೆ ಹೋಯ್ತು ಎಂದು ಹೇಳಬೇಕಲ್ಲ?. ನೀವ್ಯಾಕೆ ಕಳುಹಿಸಿದ್ದು ಎಂದು ಅಧಿಕಾರಿಗಳ ಮೇಲೆ ಹೋಗ್ತಾರೆ. ಅಧಿಕಾರಿಗಳನ್ನು ಹಿಡಿದಿಟ್ಟುಕೊಳ್ಳುವ ಕೆಲಸವನ್ನು ಅಭಯ್​ ಪಾಟೀಲ್​ ಮಾಡುತ್ತಿದ್ದಾರೆ. ಅವರು ಸರ್ಕಸ್ ಕಂಪನಿಯಲ್ಲಿನ ರಿಂಗ್ ಮಾಸ್ಟರ್ ರೀತಿ. ಯಾವ ರೀತಿ ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡುತ್ತಾರೆ ಎಂಬುದು ಸ್ಥಳೀಯವಾಗಿ ಎಲ್ಲರಿಗೂ ಗೊತ್ತು. ಈಗ ದೂರು ಕೊಟ್ಟಿದ್ದಾರೆ. ತಪ್ಪಿದ್ದರೆ ಕ್ರಮ ಕೈಗೊಳ್ಳಲಿ ಎಂದು ತಿಳಿಸಿದರು

Loading

Leave a Reply

Your email address will not be published. Required fields are marked *