ಸಚಿವ ಸ್ಥಾನದ ಅವಶ್ಯಕತೆ ಇಲ್ಲ, ಮುಂದೆ ಮಂತ್ರಿ ಮಾಡೋದು ಬೇಡ: ರಾಯರೆಡ್ಡಿ

ಕೊಪ್ಪಳ: ಸಚಿವ ಸ್ಥಾನ ಸಿಕ್ಕಿಲ್ಲ ಅಂತ ನನಗೇನು ಬೇಜಾರಗಿಲ್ಲ. ಸಚಿವ ಸ್ಥಾನದ ಅವಶ್ಯಕತೆಯೂ ಇಲ್ಲ, ಮುಂದೆ ಮಂತ್ರಿ ಮಾಡೋದು ಕೂಡ ಬೇಡ. ಈ ಬಗ್ಗೆ ಬೇಕಾದರೆ ಬರೆದುಕೊಡುತ್ತೇನೆ ಎಂದು ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಸಿಎಂ ಅವರೇ ನಂಗೆ ಕ್ಯಾಬಿನೆಟ್ ದರ್ಜೆ ಸ್ಥಾನ ನೀಡೋಕೆ ರೆಡಿಯಾಗಿದ್ದರು. ನಾನೇ ಬೇಡ ಅಂದಿದ್ದೇನೆ, ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನ ನೀಡುತ್ತೇನೆ ಅಂದಿದ್ದರು. ನಮಗೆ ಯಾವುದೇ ಬೇಜಾರಿಲ್ಲ. ಪತ್ರ ಬರೆದಿದ್ದು ಶಾಸಕರು- ಸಚಿವರ ಮಧ್ಯೆ ಸಮನ್ವಯ ಆಗಲಿ ಅಂತ. ಕಲಬುರ್ಗಿಯಲ್ಲಿ ಬಿ.ಆರ್.ಪಾಟೀಲ್ ಪ್ರಿಯಾಂಕ್ ಖರ್ಗೆ ಮಧ್ಯೆ ಸಮನ್ವಯ ಕೊರತೆಯಾಗಿರಬಹುದು ಅದು ನಂಗೆ ಗೊತ್ತಿಲ್ಲ. ಅಲ್ಲಿನ ಶಾಸಕ ಅಜಯ್ ಸಿಂಗ್ ಕೂಡಾ ಸಹಿ ಮಾಡಿದ್ದರು. ಆದರೆ ಅವರಿಗೆ ಮುನಿಸಿದೆ ಎನ್ನೋದು ಗೊತ್ತಿಲ್ಲ. ಬಿ.ಆರ್.ಪಾಟೀಲ್ ಗೂ ಮಂತ್ರಿ ಸ್ಥಾನ ಸಿಕ್ಕಿಲ್ಲ ಅಂತ ಬೇಜಾರಿಲ್ಲ. ಅವರಿಗೆ ಗೌರವ ಸಿಕ್ತಿಲ್ಲ ಅಂತ ಬೇಜಾರಿದೆ ಎಂದರು.

Loading

Leave a Reply

Your email address will not be published. Required fields are marked *