ನಿಖಿಲ್ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ: ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ: ಮುಂದಿನ 5 ವರ್ಷ ನಿಖಿಲ್ರನ್ನು ಚುನಾವಣೆಗೆ ಕರೆತರುವ ಪ್ರಶ್ನೆ ಇಲ್ಲ ಎಂದು ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕಲಾವಿದನಾಗಿ ಜೀವನ ರೂಪಿಸಿಕೊಳ್ಳುವಂತೆ ನಿಖಿಲ್ಗೆ ಹೇಳಿದ್ದೇನೆ. ರಾಜಕೀಯದ ಸಹವಾಸಕ್ಕೆ ಹೋಗದೆ, ಭಗವಂತ ಕೊಟ್ಟ ಕಲೆ ಇದೆ. ನಿಖಿಲ್ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ.
ಈಗಾಗಲೇ 3 ಚಿತ್ರ ನಿರ್ಮಾಣ ಮಾಡಲು ಹಲವು ಸಂಸ್ಥೆಗಳು ಬಂದಿವೆ. ಈಗಾಗಲೇ ನಿಖಿಲ್ ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದಾನೆ. ಮಂಡ್ಯ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧಿಸಲು ತಯಾರಿರಲಿಲ್ಲ. ಕಾರ್ಯಕರ್ತರು ಹಾಗೂ ಶಾಸಕರ ಒತ್ತಡಕ್ಕೆ ನಿಖಿಲ್ ತಲೆ ಕೊಟ್ಟ. ಸೋಲು, ಗೆಲವು ಸಾಮಾನ್ಯ, ಆ ಬಗ್ಗೆ ಚಿಂತಿಸುವುದಿಲ್ಲ. ಹೆಚ್.ಡಿ.ದೇವೇಗೌಡರು, ನಾನು ಚುನಾವಣೆಯಲ್ಲಿ ಸೋತಿಲ್ವಾ? ಎಂದರು.

Loading

Leave a Reply

Your email address will not be published. Required fields are marked *