ಮೇಕೆದಾಟು ಪಾದಯಾತ್ರೆಯಲ್ಲಿ ಚಿಕನ್, ಮಟನ್ ತಿಂದುಕೊಂಡು ಸಭೆ ಮಾಡಿದ್ದಾರೆ ; ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ಸಂಬಂಧಿಸಿದಂತೆ ಮೇಕೆದಾಟು ಪಾದಯಾತ್ರೆಯಲ್ಲಿ ಏನು ಮಾಡಿದರು ಇವರು. ಚಿಕನ್ ಮಟನ್ ತಿಂದುಕೊಂಡು ಇವರು ಸಭೆ ಮಾಡಿದ್ದಾರೆ. ಇವರ ಸ್ನೇಹಿತ ಅಲ್ವಾ ಸ್ಟಾಲಿನ್ ಅವರ ಜೊತೆ ಮಾತಾಡಲಿ. ನಮ್ಮಲ್ಲಿ ಇನ್ನೂ ಮೊದಲ ಬೆಳೆ ಕೂಡ ಬೆಳೆಯಲಾಗಿಲ್ಲ. ಅಲ್ಲಿ ನಾಲ್ಕು ಲಕ್ಷ ಎಕರೆಗೆ ಸೌಲಭ್ಯ ಪಡೆದುಕೊಂಡಿದ್ದಾರೆ. ಈಗ ನಮ್ಮ ರೈತರಿಗೆ ಸಮಸ್ಯೆ ಆಗಿದೆ. ರೆಡ್ ಕಾರ್ಪೆಟ್ ಹಾಕಿ ಸ್ಟಾಲಿನ್ ಸ್ವಾಗತ ಮಾಡಿದ್ದಾರೆ. ನನಗೂ ಒಮ್ಮೆ ಪೆನ್ ಕೊಡಿ ಅಂತಿದ್ದಾರೆ. ಪೆನ್ ಯಾಕೆ ಇಂತಹ ಕೆಲಸ ಮಾಡಲಿಕ್ಕಾ.? ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

Loading

Leave a Reply

Your email address will not be published. Required fields are marked *