ಬೆಂಗಳೂರು: ಮತ್ತೆ ಮಳೆಯ ಮುನ್ಸೂಚನೆ ಸಿಕ್ಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಳೆ ಆರಂಭ ಹೊತ್ತಿಗೆ ಎಲ್ಲಾ ಕೆಲಸ ಮುಗಿಸಲು ಸೂಚನೆ ನೀಡಿದ್ದೇನೆ. ಶೇಕಡಾ 50ರಷ್ಟು ಸರ್ಕಾರದ ಬಿಲ್ಗಳನ್ನು ರಿಲೀಸ್ ಮಾಡಲಿದ್ದೇವೆ.
432 ಕೋಟಿ ಬಿಬಿಎಂಪಿ ಕಾಮಗಾರಿ ಬಿಲ್ ಬಿಡುಗಡೆ ಮಾಡುತ್ತೇವೆ. ಕಾಮಗಾರಿ ಬೇಗ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ. ಅಕ್ಟೋಬರ್ 7 ರಂದು ಟ್ರಾಫಿಕ್ ಕಂಟ್ರೋಲ್ ಕುರಿತು ಸಭೆ ಮಾಡುತ್ತೇವೆ. ಬೆಂಗಳೂರಿನ ಎಲ್ಲಾ ಕಡೆ ಟ್ರಾಫಿಕ್ ಕಂಟ್ರೋಲ್ ಅಸಾಧ್ಯ. ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕ್ರಮ ತೆಗೆದುಕೊಳ್ಳಬೇಕು ಎಂದರು.